ಬ್ರೇಕಿಂಗ್ ನ್ಯೂಸ್
08-08-21 02:07 pm Headline Karnataka News Network ಕ್ರೀಡೆ
ಬೆಂಗಳೂರು, ಆಗಸ್ಟ್ 8: ಟೋಕಿಯೋ ಒಲಿಂಪಿಕ್ಸ್ ಜಾವೆಲಿನ್ ತ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿರುವ ನೀರಜ್ ಚೋಪ್ರಾಗೆ ಇಡೀ ದೇಶವೇ ಅಭಿನಂದನೆ ಸಲ್ಲಿಸುತ್ತಿದೆ. ಒಲಿಂಪಿಕ್ಸ್ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನ ಗೆದ್ದು ಕೊಟ್ಟಿರುವ ನೀರಜ್ಗೆ ಬಿಸಿಸಿಐ, ಹರಿಯಾಣ ರಾಜ್ಯ ಸರ್ಕಾರ, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಸೇರಿದಂತೆ ಹಲವರು ಬಹುಮಾನ ಘೋಷಿಸಿದ್ದಾರೆ. ಇದೇ ವೇಳೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಚಿನ್ನದ ಹುಡುಗನಿಗೆ ಗೋಲ್ಡನ್ ಪಾಸ್ ನೀಡಿ ಗೌರವ ಸಲ್ಲಿಸಿದೆ.
ಕೆಎಸ್ಆರ್ಟಿಸಿ ಸಂಸ್ಥೆಯ 60 ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲೇ ಈ ವಿಶೇಷ ಗೌರವವನ್ನು ದೇಶಕ್ಕೆ ಕೀರ್ತಿ ತಂದ ಚೋಪ್ರಾಗೆ ಸಲ್ಲಿಸಲಾಗಿದ್ದು, ಈ ಬಗ್ಗೆ ಕೆಎಸ್ಆರ್ಟಿಸಿ ಅಧಿಕೃತ ಟ್ವಿಟರ್ ಅಕೌಂಟ್ನಲ್ಲಿ ಟ್ವೀಟ್ ಮಾಡಿದೆ.

ಅನಂತ ಅಭಿನಂದನೆಗಳು. ಚಿನ್ನದ ಹುಡುಗ ನೀರಜ್ ಚೋಪ್ರಾ ಅವರ ಅತ್ಯುನ್ನತ ಸಾಧನೆಯನ್ನು ಸಂಭ್ರಮಿಸಿ ಹಾರೈಸುತ್ತಾ, ಕೆಎಸ್ಆರ್ಟಿಸಿಯು 60 ವಸಂತಗಳನ್ನು ಪೂರೈಸಿರುವ ಸವಿನೆನಪಿನಲ್ಲಿ ನೀರಜ್ ಚೋಪ್ರಾ ಅವರಿಗೆ ಕೆಎಸ್ಆರ್ಟಿಸಿ ಗೋಲ್ಡನ್ ಪಾಸ್ ನೀಡಲಾಗುವುದು ಎಂದು ಟ್ವೀಟ್ ನಲ್ಲಿ ತಿಳಿಸಿದೆ.

ಗೋಲ್ಡನ್ ಪಾಸ್ ವಿಶೇಷ ಏನು?
ಕೆಎಸ್ಆರ್ಟಿಸಿ ಕೊಡಮಾಡುವ ಗೋಲ್ಡನ್ ಪಾಸ್ ಮೂಲಕ ನಿಗಮದ ಯಾವುದೇ ಬಸ್ಸಿನಲ್ಲಿ ರಾಜ್ಯ ಹಾಗೂ ಅಂತಾರಾಜ್ಯಗಳಲ್ಲಿ ಜೀವಿತಾವಧಿ ವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದು ಗೌರವ ಸೂಚಕವಾಗಿ ಕೊಡಲಾಗುವ ಸವಲತ್ತು ಆಗಿದ್ದು, ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದು ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ ಕಾರಣಕ್ಕಾಗಿ ನೀರಜ್ ಚೋಪ್ರಾ ಅವರಿಗೆ ಇದನ್ನು ಕೆಎಸ್ಆರ್ಟಿಸಿ ನೀಡಿದೆ.

ಅದಿತಿ ಅಶೋಕ್ಗೂ ಉಚಿತ ಪಾಸ್
ಪದಕ ಗೆಲ್ಲುವುದು ಸಾಧ್ಯವಾಗದಿದ್ದರೂ ಗಾಲ್ಫ್ ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹೃದಯ ಗೆದ್ದ ಕನ್ನಡತಿ ಅದಿತಿ ಅಶೋಕ್ ಅವರಿಗೂ ಕೆಎಸ್ಆರ್ಟಿಸಿಯಿಂದ ಉಚಿತ ಪಾಸ್ ನೀಡುವುದಾಗಿ ಘೋಷಿಸಿದೆ. ಒಲಿಂಪಿಕ್ನಲ್ಲಿ ಅದ್ಭುತ ಆಟವಾಡಿದ ಕನ್ನಡದ ಕುವರಿ, ಅರ್ಜುನ ಪ್ರಶಸ್ತಿ ವಿಜೇತೆ ಅದಿತಿ ಅಶೋಕ್ ಅವರಿಗೆ ಕೆಎಸ್ಆರ್ಟಿಸಿ ಉಚಿತ ಪಾಸ್ ನೀಡುವ ಮೂಲಕ ಅಭಿನಂದನೆ ಸಲ್ಲಿಸುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.
— KSRTC (@KSRTC_Journeys) August 7, 2021
KSRTC Announces Golden Pass for Tokyo Olympic Gold Medallist Neeraj Chopra lifetime pass for Aditi Ashok.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 09:01 pm
Mangalore Correspondent
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm