ಬ್ರೇಕಿಂಗ್ ನ್ಯೂಸ್
23-08-21 10:44 am Mykhel: Sadashiva ಕ್ರೀಡೆ
ನೈರೋಬಿ: ಪ್ರತಿಭಾನ್ವಿತ ಲಾಂಗ್ ಜಂಪರ್ ಶೈಲಿ ಸಿಂಗ್ ಕೀನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ಅಂಡರ್ 20 ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ಇದೇ ವಿಭಾಗದಲ್ಲಿ ಒಂದು ಸೆಂಟಿ ಮೀಟರ್ ಹೆಚ್ಚು ಜಿಗಿದ್ದರೂ ಭಾರತದ ಹೆಸರಿನಲ್ಲೊಂದು ಇತಿಹಾಸ ನಿರ್ಮಾಣವಾಗುತ್ತಿತ್ತು. ಆದರೆ ಶೈಲಿ ಬೆಳ್ಳಿಗೆ ತೃಪ್ತಿಪಟ್ಟರು.
17ರ ಹರೆಯದ ಶೈಲಿ ಸಿಂಗ್ ಅವರ ವೈಯಕ್ತಿಕ ಅತ್ಯುತ್ತಮ ಸಾಧನೆ 6.59 ಮೀಟರ್. ಆದರೆ ಈ ದೂರ ಕೂಡ ಶೈಲಿಗೆ ಬಂಗಾರ ಗೆಲ್ಲಲು ನೆರವಾಗಲಿಲ್ಲ. ಈ ವಿಭಾಗದಲ್ಲಿ ಚಿನ್ನ ಸ್ವೀಡನ್ನ ಹಾಲಿ ಜೂನಿಯರ್ ಚಾಂಪಿಯನ್ ಮಾಜ ಅಸ್ಕಾಗ್ಗೆ ದೊರೆಯಿತು.

ಭಾನುವಾರ (ಆಗಸ್ಟ್ 22) ನಡೆದ ಫೈನಲ್ ಸ್ಪರ್ಧೆಯಲ್ಲಿ ಅಸ್ಕಾಗ್ 6.60 ಮೀ. ಸಾಧನೆಯೊಂದಿಗೆ ಬಂಗಾರ ತನ್ನದಾಗಿಸಿಕೊಂಡರು. ಉಕ್ರೇನ್ನ ಮಾರಿಯಾ ಹೋರಿಲೋವಾ ಅವರು 6.50 ಮೀಟರ್ ದೂರದ ಸಾಧನೆಯೊಂದಿಗೆ ಕಂಚು ಪಡೆದುಕೊಂಡರು. ಅಂದ್ಹಾಗೆ ಶೈಲಿ, ದಂತಕತೆ ಅಂಜು ಬಾಬಿ ಜಾರ್ಜ್ ಅವರ ಶಿಷ್ಯೆ.
"6.59 ಮೀಟರ್ಗಿಂತ ದೂರ ಜಿಗಿದಿದ್ದರೆ ಬಹುಶಃ ನಾನು ಬಂಗಾರ ಗೆಲ್ಲುತ್ತಿದ್ದೆನೋ ಏನೋ. ಬಂಗಾರ ಗೆದ್ದು ರಾಷ್ಟ್ರಗೀತೆ ಮೊಳಗಿಸು ಎಂದು ನನ್ನ ತಾಯಿ ನನಗೆ ಹೇಳಿದ್ದರು. ಆದರೆ ಅದು ನನ್ನಿಂದ ಈ ಬಾರಿ ಸಾಧ್ಯವಾಗಲಿಲ್ಲ. ಮುಂದೆ ಕೊಲಂಬಿಯಾದಲ್ಲಿ ನಡೆಯಲಿರುವ ಚಾಂಪಿಯನ್ಶಿಪ್ನಲ್ಲಿ ಖಂಡಿತಾ ಚಿನ್ನ ಗೆಲ್ಲುತ್ತೇನೆ," ಎಂದು ಸ್ಪರ್ಧೆಯ ಬಳಿಕ ಶೈಲಿ ಭಾವುಕರಾಗಿ ಹೇಳಿದ್ದಾರೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm