ಬ್ರೇಕಿಂಗ್ ನ್ಯೂಸ್
01-08-20 02:07 pm Headline Karnataka News Network ಕ್ರೀಡೆ
ಹೊಸದಿಲ್ಲಿ: ದಾಖಲೆಗಳಿಗೆ ಪರ್ಯಾಯ ಹೆಸರೇ ಸಚಿನ್ ತೆಂಡುಲ್ಕರ್. ಆದರೆ ಅವರಿಗೆ ಒಲಿಯದ ದಾಖಲೆಗಳೂ ಸಾಕಷ್ಟಿವೆ. ಇದರಲ್ಲಿ ಪ್ರಮುಖವಾದುದೆಂದರೆ, ಟೆಸ್ಟ್ ಕ್ರಿಕೆಟ್ನಲ್ಲಿ ಶತಕ ಬಾರಿಸಿದ ಅತೀ ಕಿರಿಯ ಆಟಗಾರನೆಂಬ ದಾಖಲೆ ಸ್ವಲ್ಪದರಲ್ಲೇ ಕೈತಪ್ಪಿದ್ದು. ಇದಕ್ಕೆ ತಾನೇ ಕಾರಣ ಎಂದು ನ್ಯೂಜಿಲ್ಯಾಂಡಿನ ಮಾಜಿ ವೇಗಿ ಡ್ಯಾನಿ ಮಾರಿಸನ್ ಬಹಳ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ!
ನಾಯಕ ನೀಡಿದ ಎಚ್ಚರಿಕೆ
‘ಆಗಷ್ಟೇ ಪಾಕಿಸ್ಥಾನ ಪ್ರವಾಸ ಮುಗಿಸಿದ ತೆಂಡುಲ್ಕರ್ ನ್ಯೂಜಿಲ್ಯಾಂಡಿಗೆ ಆಗಮಿಸಿದ್ದರು. ಈ ಹುಡುಗನ ಬಗ್ಗೆ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಅಭ್ಯಾಸ ತಂಡದ ನಾಯಕ ಕೆನ್ ರುದರ್ಫೋರ್ಡ್ ಎಚ್ಚರಿಸಿದ್ದರು.
ನನಗೂ 16ರ ಹರೆಯದ ಸಚಿನ್ ಬಗ್ಗೆ ಕುತೂಹಲ ಮೂಡಿತ್ತು. ಆವರು ರಿಚರ್ಡ್ ಹ್ಯಾಡ್ಲಿ ಎಸೆತಗಳನ್ನೂ ದಿಟ್ಟ ರೀತಿಯಲ್ಲಿ ನಿಭಾಯಿಸುತ್ತಿದ್ದರು…’ ಎಂದು ಮಾರಿಸನ್ 1990ರ ಘಟನೆಯನ್ನು ಮೆಲುಕು ಹಾಕಿದ್ದಾರೆ.
29 ವರ್ಷಗಳ ದಾಖಲೆ
ಪ್ರಥಮ ಪಂದ್ಯದಲ್ಲಿ ಸೊನ್ನೆ ಮತ್ತು 24 ರನ್ ಮಾಡಿದ ಸಚಿನ್, ನೇಪಿಯರ್ನ ದ್ವಿತೀಯ ಟೆಸ್ಟ್ನಲ್ಲಿ ಶತಕದತ್ತ ದೌಡಾಯಿಸಿದ್ದರು. ಇದನ್ನು ಸಾಧಿಸಿದ್ದೇ ಆದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಶತಕ ಬಾರಿಸಿದ ವಿಶ್ವದ ಅತೀ ಕಿರಿಯ ಆಟಗಾರನೆಂಬ ವಿಶ್ವ ದಾಖಲೆ ನಿರ್ಮಾಣಗೊಳ್ಳುತ್ತಿತ್ತು. 1961ರಷ್ಟು ಹಿಂದೆ ಪಾಕಿಸ್ಥಾನದ ಮುಷ್ತಾಕ್ ಮೊಹಮ್ಮದ್ 17 ವರ್ಷ, 78ನೇ ದಿನದಲ್ಲಿ ಬಾರಿಸಿದ ಶತಕದ ದಾಖಲೆ ಪತನಗೊಳ್ಳುತ್ತಿತ್ತು.
88ಕ್ಕೆ ಕೊನೆಗೊಂಡ ಆಟ
’88 ರನ್ ಮಾಡಿ ಆಡುತ್ತಿದ್ದ ತೆಂಡುಲ್ಕರ್ಗೆ ನಾನು ಬೌಲಿಂಗ್ ಮಾಡಲಿಳಿದಿದ್ದೆ. ನನಗೆ 3 ಬೌಂಡರಿಗಳ ರುಚಿ ತೋರಿಸಿ ಶತಕ ಪೂರ್ತಿ ಮಾಡುತ್ತಾರೇನೋ ಎಂಬ ಆತಂಕ ಮನೆಮಾಡಿತ್ತು. ಆದರೆ ಅದೇ ಮೊತ್ತಕ್ಕೆ ನಾನು ಅವರ ವಿಕೆಟ್ ಹಾರಿಸಿದೆ. ಮಿಡ್ ಆಫ್ನಲ್ಲಿದ್ದ ಜಾನ್ ರೈಟ್ ಕ್ಯಾಚ್ ಪಡೆದಿದ್ದರು. ನಾನೊಂದು ದೊಡ್ಡ ಸಾಹಸ ಮಾಡಿದ್ದೆ’ ಎಂದು ಮಾರಿಸನ್ ಖುಷಿಯಿಂದ ಹೇಳಿದರು.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm