ಬ್ರೇಕಿಂಗ್ ನ್ಯೂಸ್
01-08-20 02:07 pm Headline Karnataka News Network ಕ್ರೀಡೆ
ಹೊಸದಿಲ್ಲಿ: ದಾಖಲೆಗಳಿಗೆ ಪರ್ಯಾಯ ಹೆಸರೇ ಸಚಿನ್ ತೆಂಡುಲ್ಕರ್. ಆದರೆ ಅವರಿಗೆ ಒಲಿಯದ ದಾಖಲೆಗಳೂ ಸಾಕಷ್ಟಿವೆ. ಇದರಲ್ಲಿ ಪ್ರಮುಖವಾದುದೆಂದರೆ, ಟೆಸ್ಟ್ ಕ್ರಿಕೆಟ್ನಲ್ಲಿ ಶತಕ ಬಾರಿಸಿದ ಅತೀ ಕಿರಿಯ ಆಟಗಾರನೆಂಬ ದಾಖಲೆ ಸ್ವಲ್ಪದರಲ್ಲೇ ಕೈತಪ್ಪಿದ್ದು. ಇದಕ್ಕೆ ತಾನೇ ಕಾರಣ ಎಂದು ನ್ಯೂಜಿಲ್ಯಾಂಡಿನ ಮಾಜಿ ವೇಗಿ ಡ್ಯಾನಿ ಮಾರಿಸನ್ ಬಹಳ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ!
ನಾಯಕ ನೀಡಿದ ಎಚ್ಚರಿಕೆ
‘ಆಗಷ್ಟೇ ಪಾಕಿಸ್ಥಾನ ಪ್ರವಾಸ ಮುಗಿಸಿದ ತೆಂಡುಲ್ಕರ್ ನ್ಯೂಜಿಲ್ಯಾಂಡಿಗೆ ಆಗಮಿಸಿದ್ದರು. ಈ ಹುಡುಗನ ಬಗ್ಗೆ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಅಭ್ಯಾಸ ತಂಡದ ನಾಯಕ ಕೆನ್ ರುದರ್ಫೋರ್ಡ್ ಎಚ್ಚರಿಸಿದ್ದರು.
ನನಗೂ 16ರ ಹರೆಯದ ಸಚಿನ್ ಬಗ್ಗೆ ಕುತೂಹಲ ಮೂಡಿತ್ತು. ಆವರು ರಿಚರ್ಡ್ ಹ್ಯಾಡ್ಲಿ ಎಸೆತಗಳನ್ನೂ ದಿಟ್ಟ ರೀತಿಯಲ್ಲಿ ನಿಭಾಯಿಸುತ್ತಿದ್ದರು…’ ಎಂದು ಮಾರಿಸನ್ 1990ರ ಘಟನೆಯನ್ನು ಮೆಲುಕು ಹಾಕಿದ್ದಾರೆ.
29 ವರ್ಷಗಳ ದಾಖಲೆ
ಪ್ರಥಮ ಪಂದ್ಯದಲ್ಲಿ ಸೊನ್ನೆ ಮತ್ತು 24 ರನ್ ಮಾಡಿದ ಸಚಿನ್, ನೇಪಿಯರ್ನ ದ್ವಿತೀಯ ಟೆಸ್ಟ್ನಲ್ಲಿ ಶತಕದತ್ತ ದೌಡಾಯಿಸಿದ್ದರು. ಇದನ್ನು ಸಾಧಿಸಿದ್ದೇ ಆದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಶತಕ ಬಾರಿಸಿದ ವಿಶ್ವದ ಅತೀ ಕಿರಿಯ ಆಟಗಾರನೆಂಬ ವಿಶ್ವ ದಾಖಲೆ ನಿರ್ಮಾಣಗೊಳ್ಳುತ್ತಿತ್ತು. 1961ರಷ್ಟು ಹಿಂದೆ ಪಾಕಿಸ್ಥಾನದ ಮುಷ್ತಾಕ್ ಮೊಹಮ್ಮದ್ 17 ವರ್ಷ, 78ನೇ ದಿನದಲ್ಲಿ ಬಾರಿಸಿದ ಶತಕದ ದಾಖಲೆ ಪತನಗೊಳ್ಳುತ್ತಿತ್ತು.
88ಕ್ಕೆ ಕೊನೆಗೊಂಡ ಆಟ
’88 ರನ್ ಮಾಡಿ ಆಡುತ್ತಿದ್ದ ತೆಂಡುಲ್ಕರ್ಗೆ ನಾನು ಬೌಲಿಂಗ್ ಮಾಡಲಿಳಿದಿದ್ದೆ. ನನಗೆ 3 ಬೌಂಡರಿಗಳ ರುಚಿ ತೋರಿಸಿ ಶತಕ ಪೂರ್ತಿ ಮಾಡುತ್ತಾರೇನೋ ಎಂಬ ಆತಂಕ ಮನೆಮಾಡಿತ್ತು. ಆದರೆ ಅದೇ ಮೊತ್ತಕ್ಕೆ ನಾನು ಅವರ ವಿಕೆಟ್ ಹಾರಿಸಿದೆ. ಮಿಡ್ ಆಫ್ನಲ್ಲಿದ್ದ ಜಾನ್ ರೈಟ್ ಕ್ಯಾಚ್ ಪಡೆದಿದ್ದರು. ನಾನೊಂದು ದೊಡ್ಡ ಸಾಹಸ ಮಾಡಿದ್ದೆ’ ಎಂದು ಮಾರಿಸನ್ ಖುಷಿಯಿಂದ ಹೇಳಿದರು.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm