ಬ್ರೇಕಿಂಗ್ ನ್ಯೂಸ್
30-08-21 11:06 am Mykhel: Madhukar shetty ಕ್ರೀಡೆ
ಟೋಕಿಯೋ, ಆಗಸ್ಟ್ 30: ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಅಥ್ಲೀಟ್ಗಳ ಪದಕದ ಬೇಟೆ ಮುಂದುವರಿದಿದೆ. ಜಾವೆಲಿನ್ ಎಸೆತದಲ್ಲಿ ಭಾರತ ಎರಡು ಪದಕಗಳನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಕಳೆದ 24 ಗಂಟೆಗಳ ಅಂತರದಲ್ಲಿ ಭಾರತ ಪ್ಯಾರಾಲಿಂಪಿಕ್ಸ್ನಲ್ಲಿ 7ನೇ ಪದಕವನ್ನು ಗೆದ್ದುಕೊಂಡಂತಾಗಿದೆ. ಜಾವೆಲಿನ್ ಎಸೆತದಲ್ಲಿ ಭಾರತದ ದೇವೇಂದ್ರ ಝಝಾರಿಯಾ ಹಾಗೂ ಸುಂದರ್ ಸಿಂಗ್ ಬೆಳ್ಳಿ ಹಾಗೂ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಈ ಸಾಧನೆ ಮಾಡಿ ಮಿಂಚಿದ್ದಾರೆ.
ಎರಡು ಬಾರಿ ಪ್ಯಾರಾಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿರುವ ದೇವೇಂದ್ರ ಝಝಾರಿಯಾ ಈ ಬಾರಿಯೂ ಭಾರತದ ಕ್ರೀಡಾಭಿಮಾನಿಗಳು ಗೆಮ್ಮೆ ಪಡುವಂತಾ ಸಾಧನೆ ಮಾಡಿದ್ದಾರೆ. ಫೈನಲ್ನಲ್ಲಿ ದೇವೇಂದ್ರ ಅವರು 64.35 ಎಸೆಯುವ ಮೂಲಕ ತಮ್ಮ ವೈಯಕ್ತಿಕ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಈ ಮೂಲಕ ಬೆಳ್ಳಿಯ ಪದಕವನ್ನು ಗೆದ್ದು ಬೀಗಿದ್ದಾರೆ.
ಇನ್ನು ಇದೇ ಸ್ಪರ್ಧೆಯಲ್ಲಿ ಭಾರತದ ಸುಂದರ್ ಸಿಂಗ್ ಗುರ್ಜಾರ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. 64.01 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಸುಂದರ್ ಸಿಂಗ್ ಗುರ್ಜಾರ್ ಈ ಬಾರಿಯ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ 7ನೇ ಪದಕಕ್ಕೆ ಕೊರಳೊಡ್ಡುವಂತೆ ಮಾಡಿದ್ದಾರೆ. ಈ ಸ್ಪರ್ಧೆಯಲ್ಲಿ ಶ್ರೀಲಂಕಾದ ಜಾವೆಲಿನ್ ಎಸೆತಗಾರ ಹೆರಾತ್ ಮುಡಿಯನ್ಸ್ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. 67.79 ಮೀಟರ್ ದೂರಕ್ಕೆ ಎಸೆದು ಈ ಸಾಧನೆ ಮಾಡಿದ್ದಾರೆ ಶ್ರೀಲಂಕಾದ ಈ ಕ್ರೀಡಾಪಟು.

ಈ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಭಾರತದ ಮೂವರು ಕ್ರೀಡಾಒಟುಗಳು ಭಾಗವಹಿಸಿದ್ದರು. ದೇವೇಂದ್ರ ಜಜಾರಿಯಾ, ಅಜೀತ್ ಸಿಂಗ್ ಮತ್ತು ಸುಂದರ್ ಸಿಂಗ್ ಗುರ್ಜಾರ್ ಸರ್ಧೆಯನ್ನು ಮಾಡಿದ್ದರು. ಸ್ಪರ್ಧೆಗೆ ಮುನ್ನವೇ ಭಾರತದ ದೇವೇಂದ್ರ ತಮ್ಮ ಹೆಸರಿನಲ್ಲಿ ಎಫ್ 46 ವಿಭಾಗದ ವಿಶ್ವ ದಾಖಲೆಯನ್ನು ಹೊಂದಿದ್ದರು. ಅಲ್ಲದೆ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಎರಡು ಚಿನ್ನದ ಪದಕವನ್ನು ಗೆದ್ದಿರುವ ಏಕೈಕ ಕ್ರೀಡಾಪಟು ಎಂಬ ಸಾಧನೆಯನ್ನು ಕೂಡ ಮಾಡಿದ್ದಾರೆ. ಈಗ ಇವರ ಈ ಸಾಧನೆಗೆ ಬೆಳ್ಳಿಯ ಪದಕ ಕೂಡ ಸೇರ್ಪಡೆಗೊಂಡಿದೆ.
ಈ ಬಾರಿಯ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ 8 ಕ್ರೀಡಾಪಟುಗಳ ಪ್ರಬಲ ತಂಡವನ್ನು ಕಳುಹಿಸಿದೆ. ಇದರಲ್ಲಿ ದೇವೇಂದ್ರ ಝಝಾರಿಯಾ ಪದಕ ಗೆಲ್ಲವು ಪ್ರಮುಖ ಸ್ಪರ್ಧಿಯಾಗಿದ್ದರು. ಸಂದೀಪ್ ಚೌಧರಿ (ಎಫ್ 44 ವಿಭಾಗ), ಸುಮಿತ್ ಆಂಟಿಲ್ (ಎಫ್ 64 ವಿಭಾಗ), ಸುಂದರ್ ಸಿಂಗ್ ಗುರ್ಜಾರ್ (ಎಫ್ 46 ವಿಭಾಗ), ಅಜೀತ್ ಸಿಂಗ್ ಯಾದವ್ (ಎಫ್ 46 ವಿಭಾಗ), ನವದೀಪ್ (ಎಫ್ 41 ವಿಭಾಗ) ಮತ್ತು ರಂಜೀತ್ ಭಾಟಿ (ಎಫ್ 57 ವಿಭಾಗ)ದಲ್ಲಿ ಸ್ಪರ್ಧಿಸುತ್ತಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm