ಬ್ರೇಕಿಂಗ್ ನ್ಯೂಸ್
30-08-21 11:30 am Mykhel: Madhukar shetty ಕ್ರೀಡೆ
ಟೋಕಿಯೋ, ಆಗಸ್ಟ್ 30: ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಕ್ರೀಡಾಪಟುಗಳು ತಮ್ಮ ಪದಕ ಬೇಟೆಯನ್ನು ಮುಂದುವರಿಸಿದ್ದಾರೆ. 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಇಂದು ಭಾರತದ ಶೂಟರ್ ಅವನಿ ಲೇಖರಾ ಚಿನ್ನಕ್ಕೆ ಗುರಿಯಿಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತ ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಮೊದಲ ಚಿನ್ನದ ಪದಕ ಗೆದ್ದಿದೆ.
ಅವನಿ ಲೇಖರಾ ಚಿನ್ನದ ಪದಕ ಗೆಲ್ಲುವ ಮೂಲಕ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಮಹಿಳಾ ಸ್ಪರ್ಧಿ ಗೆದ್ದ ಪ್ರಪ್ರಥಮ ಚಿನ್ನದ ಪದಕ ಎಂಬ ಐತಿಹಾಸಿಕ ಸಾಧನೆಯಾನ್ನು ತಮ್ಮದಾಗಿಸಿದ್ದಾರೆ. ಇದು ಭಾರತ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಗೆದ್ದ ಒಟ್ಟಾರೆ ಐದನೇ ಚಿನ್ನದ ಪದಕವಾಗಿದೆ.

ಅವನಿ ಲೇಖರಾ ಫೈನಲ್ನಲ್ಲಿ ಒಟ್ಟು 249.6 ಅಂಕಗಳನ್ನು ಸಂಪಾದಿಸುವ ಮೂಲಕ ವಿಶ್ವ ದಾಖಲೆಯನ್ನು ಕೂಡ ಸರಿಗಟ್ಟಿದ ಸಾಧನೆ ಮಾಡಿದ್ದಾರೆ. 2018ರ ಡಿಸೆಂಬರ್ನಲ್ಲಿ ಉಕ್ರೈನ್ನ ಇರ್ಯಾನಾ ಶೆಟ್ನಿಕ್ ಇಷ್ಟೇ ಅಂಕಗಳನ್ನು ಸಂಪಾದಿಸುವ ಮೂಲಕ ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಭಾರತೀಯ ಶೂಟರ್ ಸರಿಗಟ್ಟಿದ್ದಾರೆ. 19ರ ಹರೆಯದ ಅವನಿ ಆರಂಭದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ.
ಆದರೆ ನಂತರ ತಮ್ಮ ಪ್ರದರ್ಶನವನ್ನು ಉತ್ತಮಗೊಳಿಸುತ್ತಾ ಸಾಗಿದ್ದರು. ಕ್ವಾಲಿಫಿಕೇಶನ್ ಸುತ್ತಿನಲ್ಲಿ 621.7 ಅಂಕಗಳನ್ನು ಸಂಪಾದಿಸಿ 7ನೇ ಸ್ಥಾನವನ್ನು ಪಡೆದುಕೊಂಡು ಫೈನಲ್ಗೆ ಪ್ರವೇಶ ಪಡೆದಿದ್ದರು. ಆದರೆ ಫೈನಲ್ ಹಂತದಲ್ಲಿ ದಾಖಲೆಯ ಪ್ರದರ್ಶನ ನೀಡುವಲ್ಲಿ ಅವನಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತ ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಮೊದಲ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm