ಬ್ರೇಕಿಂಗ್ ನ್ಯೂಸ್
30-08-21 12:50 pm Mykhel: Madhukar shetty ಕ್ರೀಡೆ
ಟೋಕಿಯೋ, ಆಗಸ್ಟ್ 30: ಪ್ಯಾರಾಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕದ ಬೇಟೆ ಮುಂದುವರಿದಿದೆ. ಪುರುಷರ ಡಿಸ್ಕಸ್ ಎಸೆತದಲ್ಲಿ ಭಾರತದ ಅಥ್ಲೀಟ್ ಯೋಗೇಶ್ ಕಥುನಿಯಾ ಸೋಮವಾರ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಫೈನಲ್ನಲ್ಲಿ 44.38 ಮೀಟರ್ ಎಸೆಯುವ ಮೂಲಕ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿದ ಯೋಗೇಶ್ ಬೆಳ್ಳಿಯ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ.
ಭಾರತದ ಯೋಗೇಶ್ ಕಥುನಿಯಾ ಅವರಿಂದ ಬ್ರೆಜಿಲ್ನ ವಿಶ್ವದಾಖಲೆಯನ್ನು ಹೊಂದಿರುವ ಅಥ್ಲೀಟ್ ಬಟಿಸ್ಟಾ ಡಾಸ್ ಸ್ಯಾಂಟೋಸ್ ಕ್ಲೌಡಿನೆ ಮಾತ್ರವೇ ಮುಂದಿದ್ದರು. ಬ್ರೆಜಿಲ್ನ ಈ ಕ್ರೀಡಾಒಟು 45.59 ಮೀ. ದೂರಕ್ಕೆ ಎಸೆಯುವ ಮೂಲಕ ಚಿನ್ನವನ್ನು ಗೆದ್ದುಕೊಂಡಿದ್ದಾರೆ.

ಕಥುನಿಯಾ ಸ್ಪರ್ಧೆ ಫೌಲ್ನೊಂದಿಗೆ ಆರಂಭವಾಯಿತು. ಆದರೆ ನಂತರ 42.84 ಮೀಟರ್ ದೂರಕ್ಕೆ ಎಸೆದರು. ಬಳಿಕ 43.55 ಮೀ. ದೂರಕ್ಕೆ ಎಸೆಯುವ ಮೂಲಕ ಉತ್ತಮ ಎಸೆತವನ್ನು ಸಾಧಿಸಿದರು. ಆದರೆ ತನ್ನ ಅಂತಿಮ ಅವಕಾಶದಲ್ಲಿ ಅತ್ಯುತ್ತಮ ಸಾಧನೆ ಮಾಡುವಲ್ಲಿ ಕಥುನಿಯಾ ಯಶಸ್ವಿಯಾದರು. ಈ ವೇಲೆ ಅವರು 44.38 ಮೀಟರ್ ದೂರಕ್ಕೆ ಎಸೆಯಲು ಯಶಸ್ವಿಯಾಗಿದ್ದರು. ಈ ಮೂಲಕ ಯೋಗೇಶ್ ಕಥುನಿಯಾ ಬೆಳ್ಳಿ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ. ಯೋಯೋಶ್ ಕಥುನಿಯಾ 24ರ ಹರೆಯದ ಅಥ್ಲೀಟ್ ಆಗಿದ್ದು 2019ರಲ್ಲಿ ದುಬೈನಲ್ಲಿ ನಡೆದಿದ್ದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕವನ್ನು ಗೆದ್ದಿದ್ದರು. ಈ ಮೂಲಕ ಪ್ಯಾರಾಲಿಂಪಿಕ್ಸ್ಗೆ ಅರ್ಹತೆಯನ್ನು ಸಂಪಾದಿಸಿದ್ದರು. ಇದೀಗ ಟೋಕಿಯೋ ಅಂಗಳದಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕವನ್ನು ಖಚಿತಪಡಿಸಿದ್ದಾರೆ.
ಭಾನುವಾರ ಭಾರತದಲ್ಲಿ ಕ್ರೀಡಾ ದಿನವನ್ನು ಆಚರಿಸಲಾಗಿತ್ತು. ಇದೇ ದಿನ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ತನ್ನ ಪದಕದ ಬೇಟೆಯನ್ನು ಆರಂಭಿಸಿತ್ತು. ಮೊದಲಿಗೆ ಟೇಬಲ್ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಬೆಳದ್ಳಿ ಪದಕವನ್ನು ಗೆಲ್ಲುವ ಮೂಲಕ ಭಾರತದ ಪದಕ ಬೇಟೆಗೆ ಚಾಲನೆ ದೊರೆಯಿತು. ನಂತರ ಒಟ್ಟು ಭಾರತ ಮೂರು ಪದಕವನ್ನು ಭಾನುವಾರ ಗೆದ್ದುಕೊಂಡಿತ್ತು. ಭಾನುವಾರ ಪ್ರದರ್ಶಿಸಿದ ಅದ್ಭುತ ಪ್ರದರ್ಶನವನ್ನು ಭಾರತೀಯ ಕ್ರೀಡಾಪಟುಗಳು ಸೋಮವಾರವೂ ಮುಂದುವರಿಸಿದ್ದಾರೆ. ಅವನಿ ಲೇಖರಾ ಚಿನ್ನದ ಪದಕ ಗೆಲ್ಲುವ ಮೂಲಕ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಮಹಿಳಾ ಸ್ಪರ್ಧಿ ಗೆದ್ದ ಪ್ರಪ್ರಥಮ ಚಿನ್ನದ ಪದಕ ಎಂಬ ಐತಿಹಾಸಿಕ ಸಾಧನೆಯಾನ್ನು ಮಾಡಿದ್ದಾರೆ. ಇದು ಭಾರತ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಗೆದ್ದ ಒಟ್ಟಾರೆ ಐದನೇ ಚಿನ್ನದ ಪದಕವಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm