ಬ್ರೇಕಿಂಗ್ ನ್ಯೂಸ್
06-09-21 04:37 pm Mykhel: Sadashiva ಕ್ರೀಡೆ
ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ, ಮುಖ್ಯ ಕೋಚ್ ಮಿಸ್ಬಾ ಉಲ್ ಹಕ್ ಮತ್ತು ಮುಖ್ಯ ಬೌಲಿಂಗ್ ಕೋಚ್ ವಾಕರ್ ಯೂನಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಟಿ20 ವಿಶ್ವಕಪ್ ಸಮೀಪದಲ್ಲಿರುವಾಗಲೇ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ)ನಲ್ಲಿ ಪ್ರಮುಖ ಬದಲಾವಣೆಯಾಗಿದೆ. ಪಿಸಿಬಿ ಈ ಸಂಗತಿಯನ್ನು ಸೋಮವಾರ (ಸೆಪ್ಟೆಂಬರ್ 6) ತಿಳಿಸಿದೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿದ್ದ ಮಿಸ್ಬಾ ಉಲ್ ಹಕ್ ಮತ್ತು ಮುಖ್ಯ ಬೌಲಿಂಗ್ ಕೋಚ್ ಆಗಿದ್ದ ಯೂನಿಸ್ ಖಾನ್ ಇಬ್ಬರೂ ಸೋಮವಾರ ಮುಂಜಾನೆ ತಮ್ಮ ನಿರ್ಧಾರ ತಿಳಿಸಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಹೇಳಿದೆ. ವೆಸ್ಟ್ ಇಂಡೀಸ್ನಲ್ಲಿರುವ ಮಿಸ್ಬಾಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಅವರೀಗ ಐಸೊಲೇಶನ್ನಲ್ಲಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ನ್ಯೂಜಿಲೆಂಡ್ ವಿರುದ್ಧ ಇದೇ ಸೆಪ್ಟೆಂಬರ್ 25ರಿಂದ ಅಕ್ಟೋಬರ್ 3ರ ವರೆಗೆ ಐದು ಟಿ20ಐ ಪಂದ್ಯ ನಡೆಯಲಿದೆ. ಪಾಕಿಸ್ತಾನಕ್ಕೆ ಪ್ರವಾಸ ಬರಲಿರುವ ಕಿವೀಸ್ ತಂಡ ಅಲ್ಲಿ ಟಿ20ಐ ಸರಣಿ ಆಡಲಿದೆ. ಅದಾಗಿ ಇಂಗ್ಲೆಂಡ್ ವಿರುದ್ಧ ಪಾಕ್ ತಂಡಕ್ಕೆ ಎರಡು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ. ಅಕ್ಟೋಬರ್ 13 ಮತ್ತು 14ರಂದು ಪಾಕ್ ಮತ್ತು ಇಂಗ್ಲೆಂಡ್ ಮಧ್ಯೆ ಎರಡು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ.
ನ್ಯೂಜಿಲೆಂಡ್, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಬಳಿಕ ಅಕ್ಟೋಬರ್-ನವೆಂಬರ್ನಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಇದಕ್ಕೂ ಮುನ್ನ ಪಿಸಿಬಿ ಕೋಚಿಂಗ್ ವಿಭಾಗದಲ್ಲಿ ಬದಲಾವಣೆಯಾಗಲಿದೆ. ತೆರವಾಗಿರುವ ಸ್ಥಾನಕ್ಕೆ ತಾತ್ಕಾಲಿಕವಾಗಿ ಅಬ್ದುಲ್ ರಝಾಕ್ ಮತ್ತು ಸಕ್ಲೇನ್ ಮುಷ್ತಾಕ್ ಬರಲಿದ್ದಾರೆ. ಟಿ20 ವಿಶ್ವಕಪ್ಗೂ ಮುನ್ನ ಕೋಚ್ಗಳನ್ನು ಆರಿಸುವುದಾಗಿ ಪಿಸಿಬಿ ಹೇಳಿದೆ. ಟಿ20 ವಿಶ್ವಕಪ್ ಟೂರ್ನಿಗೆ ಸಂಬಂಧಿಸಿ ಸೋಮವಾರ ಪಾಕಿಸ್ತಾನ 15 ಜನರ ತಂಡ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಪಾಕ್ ತಂಡದ ಕೋಚಿಂಗ್ ಸ್ಥಾನಕ್ಕೆ ಇಬ್ಬರು ರಾಜೀನಾಮೆ ನೀಡಿರುವ ಸಂಗತಿ ಕೇಳಿ ಬಂದಿದೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 09:01 pm
Mangalore Correspondent
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm