ಬ್ರೇಕಿಂಗ್ ನ್ಯೂಸ್
19-12-21 10:09 pm HK Desk news ಕ್ರೀಡೆ
ತಿರುವನಂತಪುರಂ, ಡಿ. 19: 'ಪಯ್ಯೋಲಿ ಎಕ್ಸ್ಪ್ರೆಸ್' ಖ್ಯಾತಿಯ ಭಾರತದ ಮಾಜಿ ಅಥ್ಲೀಟ್ ಹಾಗೂ ಒಲಿಂಪಿಯನ್ ಪಿ.ಟಿ. ಉಷಾ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಕೇರಳದ ಕೋಯಿಕ್ಕೋಡ್ ಪೊಲೀಸರು ಭಾರತದ 'ಚಿನ್ನದ ಹುಡುಗಿ' ಪಿ.ಟಿ ಉಷಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಫ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಉಷಾ ಮತ್ತು ಇತರ ಆರು ಮಂದಿ ಐಪಿಸಿ 420 (ವಂಚನೆ ಮತ್ತು ಅಪ್ರಾಮಾಣಿಕತೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಎಎನ್ಎಸ್ನೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ.
"ಕೋಯಿಕ್ಕೋಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಜೋಸೆಫ್ ಅವರು ನೀಡಿದ ದೂರಿನ ಆಧಾರದ ಮೇಲೆ ಕ್ರಮ ಜರುಗಿಸಲಾಗಿದೆ. ಶುಕ್ರವಾರ ಪ್ರಕರಣ ದಾಖಲಾಗಿದ್ದು, ಶೀಘ್ರವೇ ತನಿಖೆ ಆರಂಭವಾಗಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹೊಸ ಅಪಾರ್ಟ್ಮೆಂಟ್ ಹೊಂದುವ ನಿರೀಕ್ಷೆಯಲ್ಲಿ ಜೆಮ್ಮಾ ಜೋಸೆಫ್ ಅವರು 46 ಲಕ್ಷ ರೂ.ಗಳನ್ನು ಉಷಾಗೆ ಪಾವತಿಸಿದ್ದಾರೆ. ಆದರೆ, ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವುದಾಗಿ ಉಷಾ ನೀಡಿದ್ದ ಭರವಸೆ ಹುಸಿಯಾಗಿದೆ ಎಂದು ಜೋಸೆಫ್ ದೂರಿನಲ್ಲಿ ವಿವರಿಸಿದ್ದಾರೆ. ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ಬಿಲ್ಡರ್ಗಳ ಮೇಲೆ ನಿಗಾ ಇಡುವ ನಿಯಂತ್ರಕ ಸಂಸ್ಥೆ ಕೇರಳ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವನ್ನು ದೂರುದಾರರು ಸಂಪರ್ಕಿಸಿದ್ದಾರೆ.
ಭಾರತದ ಮಾಜಿ ಅಥ್ಲೀಟ್ ಪಿ.ಟಿ. ಉಷಾ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನೇಕ ಕ್ಷೇತ್ರಗಳ ಸೆಲೆಬ್ರಿಟಿಗಳು ಬಿಜೆಪಿ ಸೇರಿದ್ದರು. ಆದರೆ, ಪಿ. ಟಿ ಉಷಾ ಸುದ್ದಿಯನ್ನು ಅಲ್ಲಗೆಳೆದಿದ್ದರು.
The Kozhikode Police in Kerala have registered a case against India’s ‘golden girl’ P.T. Usha and six others under Section IPC 420 (cheating and dishonesty) based on a complaint filed by a former athlete, Jemma Joseph.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm