ಬ್ರೇಕಿಂಗ್ ನ್ಯೂಸ್
19-12-21 10:09 pm HK Desk news ಕ್ರೀಡೆ
ತಿರುವನಂತಪುರಂ, ಡಿ. 19: 'ಪಯ್ಯೋಲಿ ಎಕ್ಸ್ಪ್ರೆಸ್' ಖ್ಯಾತಿಯ ಭಾರತದ ಮಾಜಿ ಅಥ್ಲೀಟ್ ಹಾಗೂ ಒಲಿಂಪಿಯನ್ ಪಿ.ಟಿ. ಉಷಾ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಕೇರಳದ ಕೋಯಿಕ್ಕೋಡ್ ಪೊಲೀಸರು ಭಾರತದ 'ಚಿನ್ನದ ಹುಡುಗಿ' ಪಿ.ಟಿ ಉಷಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಫ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಉಷಾ ಮತ್ತು ಇತರ ಆರು ಮಂದಿ ಐಪಿಸಿ 420 (ವಂಚನೆ ಮತ್ತು ಅಪ್ರಾಮಾಣಿಕತೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಎಎನ್ಎಸ್ನೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ.
"ಕೋಯಿಕ್ಕೋಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಜೋಸೆಫ್ ಅವರು ನೀಡಿದ ದೂರಿನ ಆಧಾರದ ಮೇಲೆ ಕ್ರಮ ಜರುಗಿಸಲಾಗಿದೆ. ಶುಕ್ರವಾರ ಪ್ರಕರಣ ದಾಖಲಾಗಿದ್ದು, ಶೀಘ್ರವೇ ತನಿಖೆ ಆರಂಭವಾಗಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹೊಸ ಅಪಾರ್ಟ್ಮೆಂಟ್ ಹೊಂದುವ ನಿರೀಕ್ಷೆಯಲ್ಲಿ ಜೆಮ್ಮಾ ಜೋಸೆಫ್ ಅವರು 46 ಲಕ್ಷ ರೂ.ಗಳನ್ನು ಉಷಾಗೆ ಪಾವತಿಸಿದ್ದಾರೆ. ಆದರೆ, ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವುದಾಗಿ ಉಷಾ ನೀಡಿದ್ದ ಭರವಸೆ ಹುಸಿಯಾಗಿದೆ ಎಂದು ಜೋಸೆಫ್ ದೂರಿನಲ್ಲಿ ವಿವರಿಸಿದ್ದಾರೆ. ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ಬಿಲ್ಡರ್ಗಳ ಮೇಲೆ ನಿಗಾ ಇಡುವ ನಿಯಂತ್ರಕ ಸಂಸ್ಥೆ ಕೇರಳ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವನ್ನು ದೂರುದಾರರು ಸಂಪರ್ಕಿಸಿದ್ದಾರೆ.
ಭಾರತದ ಮಾಜಿ ಅಥ್ಲೀಟ್ ಪಿ.ಟಿ. ಉಷಾ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನೇಕ ಕ್ಷೇತ್ರಗಳ ಸೆಲೆಬ್ರಿಟಿಗಳು ಬಿಜೆಪಿ ಸೇರಿದ್ದರು. ಆದರೆ, ಪಿ. ಟಿ ಉಷಾ ಸುದ್ದಿಯನ್ನು ಅಲ್ಲಗೆಳೆದಿದ್ದರು.
The Kozhikode Police in Kerala have registered a case against India’s ‘golden girl’ P.T. Usha and six others under Section IPC 420 (cheating and dishonesty) based on a complaint filed by a former athlete, Jemma Joseph.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:17 pm
HK News Desk
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm