ಬ್ರೇಕಿಂಗ್ ನ್ಯೂಸ್
07-02-22 04:52 pm Source: Vijayakarnataka ಕ್ರೀಡೆ
ಹೊಸದಿಲ್ಲಿ: ಮೊದಲನೇ ಒಡಿಐ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನಾಯಕ ಹಾಗೂ ಬಿಗ್ ಹಿಟ್ಟರ್ ಕೈರೊನ್ ಪೊಲಾರ್ಡ್ ಅವರನ್ನು ಔಟ್ ಮಾಡಲು ತಾವು ರೂಪಿಸಿದ್ದ ತಂತ್ರವನ್ನು ಟೀಮ್ ಇಂಡಿಯಾ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಬಹಿರಂಗಪಡಿಸಿದ್ದಾರೆ.
ಭಾನುವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲನೇ ಓಡಿಐ ಪಂದ್ಯದಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿಯ ಸಹಾಯದಿಂದ ಭಾರತ ತಂಡ 6 ವಿಕೆಟ್ಗಳಿಂದ ಗೆಲುವು ಪಡೆಯಿತು. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆತಿಥೇಯ ಭಾರತ ತಂಡ 1-0 ಮುನ್ನಡೆ ಪಡೆಯಿತು.
ಭಾರತ ತಂಡದ 1000ನೇ ಓಡಿಐ ಐತಿಹಾಸಿಕ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿ ಮ್ಯಾನ್ ಆಫ್ ದಿ ಮ್ಯಾಚ್ ಸ್ವೀಕರಿಸಿದ ಯುಜ್ವೇಂದ್ರ ಚಹಲ್ ವಿಂಡೀಸ್ ನಾಯಕ ಕೈರೊನ್ ಪೊಲಾರ್ಡ್ ಸೇರಿದಂತೆ ಒಟ್ಟು 4 ವಿಕೆಟ್ಗಳನ್ನು ತಮ್ಮ ಖಾತೆಗೆ ಹಾಕಿಕೊಂಡರು. ಆ ಮೂಲಕ ವೆಸ್ಟ್ ಇಂಡೀಸ್ ತಂಡ 176ಕ್ಕೆ ಆಲ್ಔಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು.

ವಿಂಡೀಸ್ ಎದುರು 6 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದ ಭಾರತ!
ಪಂದ್ಯದ ಬಳಿಕ ನಾಯಕ ರೋಹಿತ್ ಶರ್ಮಾ ಜೊತೆ ಮಾತನಾಡಿದ ಚಹಲ್, "ದಕ್ಷಿಣ ಆಫ್ರಿಕಾದಲ್ಲಿ ನಾನು ಹೆಚ್ಚು ಗೂಗ್ಲಿಗಳನ್ನು ಬೌಲಿಂಗ್ ಮಾಡದಿರುವ ಬಗ್ಗೆ ಪಂದ್ಯಕ್ಕೂ ಮುನ್ನ ನಡೆದಿದ್ದ ಮಾತುಕತೆ ನನ್ನ ಮನಸ್ಸಿನಲ್ಲಿತ್ತು. ವಿಂಡೀಸ್ ಬ್ಯಾಟ್ಸ್ಮನ್ಗಳು ಹಾರ್ಡ್ ಹಿಟ್ಟರ್ಗಳೆಂದು ತಿಳಿದಿದೆ. ಒಮ್ಮೆ ಅವರು ತಮ್ಮ ಹೊಡೆತಗಳಿಗೆ ಹೋಗಲು ನಿರ್ಧರಿಸಿದರೆ, ಅವರನ್ನು ತಡೆಯಲು ಸಾಧ್ಯವಾಗುವುದಿಲ್ಲ," ಎಂದರು.
"ನೀವು(ರೋಹಿತ್) ಹೇಳಿದಂತೆ, ಗೂಗ್ಲಿಗಿಂತ ನನ್ನ ಲೆಗ್ ಸ್ಪಿನ್ ಹೆಚ್ಚು ಪರಿಣಾಮಕಾರಿಯಾಗಿತ್ತು. ಹಾಗಾಗಿ ಇದನ್ನು ನಾನು ಮಿಶ್ರಣ ಮಾಡಿದೆ. ಅದರಲ್ಲೂ ವಿಶೇಷವಾಗಿ ಕೈರೊನ್ ಪೊಲಾರ್ಡ್ಗೆ ನೀವು ಹೇಳಿದಂತೆ ಮುಂದೆ ಪಿಚ್ ಹಾಕಿ ಗೂಗ್ಲಿ ಮಾಡಿದೆ. ಅದರಂತೆ ಪೊಲಾರ್ಡ್ ಔಟ್ ಆದರು," ಎಂದು ಹೇಳಿದರು.
'ಪರಿಪೂರ್ಣ ಆಟದಲ್ಲಿ ನನಗೆ ನಂಬಿಕೆ ಇಲ್ಲ' ಗೆಲುವಿನ ಬಳಿಕ ರೋಹಿತ್ ಹೇಳಿದ್ದಿದು!
100 ಓಡಿಐ ವಿಕೆಟ್ ಪೂರ್ಣಗೊಳಿಸಿದ ಬಗ್ಗೆ ಮಾತನಾಡಿ, "ಅದ್ಭುತ ಭಾವನೆ ಉಂಟಾಗುತ್ತಿದೆ. ಕಳೆದ ಐದು ವರ್ಷಗಳಿಂದ ನನ್ನ ಕ್ರಿಕೆಟ್ ವೃತ್ತಿ ಜೀವನದಲ್ಲಿ ಸಾಕಷ್ಟು ಏರಿಳಿತಗಳನ್ನು ಅನುಭವಿಸಿದ್ದೇನೆ. ಓಡಿಐ ಕ್ರಿಕೆಟ್ನಲ್ಲಿ 100 ವಿಕೆಟ್ ಕಬಳಿಸಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಇದು ದೊಡ್ಡ ಸಂಗತಿ. ಇಷ್ಟು ಬೇಗ ಈ ಮೈಲುಗಲ್ಲು ಸ್ಥಾಪಿಸುತ್ತೇನೆಂದು ಅಂದುಕೊಂಡಿರಲಿಲ್ಲ," ಎಂದು ತಿಳಿಸಿದರು.
Ind Vs Wi 1st Odi, Had The Length Been Wrong, It Would Have Gone For A Six Yuzvendra Chahal On How He Dismissed Kieron Pollard.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:17 pm
HK News Desk
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm