ಬ್ರೇಕಿಂಗ್ ನ್ಯೂಸ್
21-09-20 05:09 pm Headline Karnataka News Network ಕ್ರೀಡೆ
ದುಬೈ, ಸೆಪ್ಟಂಬರ್ 21: 13ನೇ ಆವೃತ್ತಿಯ ಐಪಿಎಲ್ ಪಂದ್ಯವೇ ಹಲವು ರೋಚಕತೆಗೆ ಸಾಕ್ಷಿಯಾಯಿತು. ಮಾರ್ಕಸ್ ಸ್ಟೋಯಿನಸ್ ಸಾಹಸದಿಂದ ದಿಲ್ಲಿ ಕ್ಯಾಪಿಟಲ್ಸ್ ಸೂಪರ್ ಓವರ್ ನಲ್ಲಿ ವಿಜಯಿ ಸಾಧಿಸಿತು. ಪಂಜಾಬ್ ಪರ ಮಯಾಂಕ್ ಅಗರ್ವಾಲ್ ಏಕಾಂಗಿ ಹೋರಾಟ ವ್ಯರ್ಥವಾಯಿತು.
ಆದರೆ ಈ ಪಂದ್ಯದಲ್ಲಿ ಅಂಪಾಯರ್ ಮಾಡಿದ ಒಂದು ತಪ್ಪು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಒಂದು ತಪ್ಪಿನಿಂದ ಪಂಜಾಬ್ ತಂಡ ಸೋಲನುಭವಿಸಬೇಕಾಯಿತು.
ಆಗಿದ್ದೇನು?: 18.3 ನೇ ಎಸೆತವನ್ನು ಮಯಾಂಕ್ ಅಗರ್ವಾಲ್ ಕವರ್ ಏರಿಯಾಗೆ ಬಾರಿಸಿ ಎರಡು ರನ್ ಓಡಿದರು. ಆದರೆ ಮತ್ತೊಂದೆಡೆ ಇದ್ದ ಕ್ರಿಸ್ ಜೋರ್ಡಾನ್ ಎರಡನೇ ರನ್ ಓಡುವಾಗ ಕ್ರೀಸ್ ಮುಟ್ಟಿಲ್ಲ ಎಂದು ಅಂಪಾಯರ್ ಒಂದು ರನ್ ಕಡಿತಗೊಳಿಸಿದರು. ಎರಡು ರನ್ ಓಡಿದರೂ ತಂಡಕ್ಕೆ ಒಂದೇ ರನ್ ನೀಡಲಾಯಿತು. ಈ ಒಂದು ರನ್ ಅಂತಿಮವಾಗಿ ತಂಡಕ್ಕೆ ಮುಳುವಾಯಿತು. ಪಂದ್ಯ ಟೈ ಆಯಿತು. ಸೂಪರ್ ಓವರ್ ನಲ್ಲಿ ರಾಹುಲ್ ಪಡೆ ಸೋಲನುಭವಿಸಿತು.

ಇಷ್ಟೇ ಆಗಿದ್ದರೆ ದೊಡ್ಡ ವಿಷಯ ಆಗುತ್ತಿರಲಿಲ್ಲ. ಆದರೆ ಅಂಪಾಯರ್ ನಿತಿನ್ ಮೆನನ್ ನೀಡಿದ ಆ ತೀರ್ಪು ತಪ್ಪಾಗಿತ್ತು. ಜೋರ್ಡಾನ್ ಸರಿಯಾಗಿ ಕ್ರೀಸ್ ಮುಟ್ಟಿದ್ದು ರೀಪ್ಲೇಯಲ್ಲಿ ಸ್ಪಷ್ಟವಾಗಿತ್ತು. ಐಸಿಸಿ ಎಲೈಟ್ ಪ್ಯಾನೆಲ್ ದರ್ಜೆಯ ಅಂಪಾಯರ್ ನಿತಿನ್ ಮೆನನ್ ತಪ್ಪಿನಿಂದ ಪಂಜಾಬ್ ತಂಡ ಸೋಲಿನೊಂದಿಗೆ ಕೂಟ ಆರಂಭಿಸಬೇಕಾಯಿತು.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಕಿಂಗ್ಸ್ ಇಲೆವೆನ್ ಆಟಗಾರ ವೀರೇಂದ್ರ ಸೆಹವಾಗ್,” ಮ್ಯಾನ್ ಆಫ್ ದಿ ಮ್ಯಾಚ್ ಗೆ ನಿಮ್ಮ ಆಯ್ಕೆ ತಪ್ಪಾಗಿತ್ತು. ಈ ತೀರ್ಪು ನೀಡಿದ ಅಂಪಾಯರ್ ಗೆ ನೀವು ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಬೇಕಿತ್ತು” ಎಂದು ಹೇಳಿದ್ದಾರೆ.
I don’t agree with the man of the match choice . The umpire who gave this short run should have been man of the match.
— Virender Sehwag (@virendersehwag) September 20, 2020
Short Run nahin tha. And that was the difference. #DCvKXIP pic.twitter.com/7u7KKJXCLb
ಮಾಜಿ ಆಟಗಾರ ಆಕಾಶ್ ಚೋಪ್ರಾ ಕೂಡಾ ಈ ಬಗ್ಗೆ ಮಾತನಾಡಿದ್ದು, ಇಷ್ಟೆಲ್ಲಾ ಟೆಕ್ನಾಲಜಿ ಇರುವಾಗ ಈ ತಪ್ಪು ನಡೆಯಬಾರದು. ಥರ್ಡ್ ಅಂಪಾಯರ್ ಆದರೂ ಇದನ್ನು ಸರಿಪಡಿಸಬಹುದಿತ್ತು ಎಂದಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm