ಬ್ರೇಕಿಂಗ್ ನ್ಯೂಸ್
21-09-20 05:09 pm Headline Karnataka News Network ಕ್ರೀಡೆ
ದುಬೈ, ಸೆಪ್ಟಂಬರ್ 21: 13ನೇ ಆವೃತ್ತಿಯ ಐಪಿಎಲ್ ಪಂದ್ಯವೇ ಹಲವು ರೋಚಕತೆಗೆ ಸಾಕ್ಷಿಯಾಯಿತು. ಮಾರ್ಕಸ್ ಸ್ಟೋಯಿನಸ್ ಸಾಹಸದಿಂದ ದಿಲ್ಲಿ ಕ್ಯಾಪಿಟಲ್ಸ್ ಸೂಪರ್ ಓವರ್ ನಲ್ಲಿ ವಿಜಯಿ ಸಾಧಿಸಿತು. ಪಂಜಾಬ್ ಪರ ಮಯಾಂಕ್ ಅಗರ್ವಾಲ್ ಏಕಾಂಗಿ ಹೋರಾಟ ವ್ಯರ್ಥವಾಯಿತು.
ಆದರೆ ಈ ಪಂದ್ಯದಲ್ಲಿ ಅಂಪಾಯರ್ ಮಾಡಿದ ಒಂದು ತಪ್ಪು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಒಂದು ತಪ್ಪಿನಿಂದ ಪಂಜಾಬ್ ತಂಡ ಸೋಲನುಭವಿಸಬೇಕಾಯಿತು.
ಆಗಿದ್ದೇನು?: 18.3 ನೇ ಎಸೆತವನ್ನು ಮಯಾಂಕ್ ಅಗರ್ವಾಲ್ ಕವರ್ ಏರಿಯಾಗೆ ಬಾರಿಸಿ ಎರಡು ರನ್ ಓಡಿದರು. ಆದರೆ ಮತ್ತೊಂದೆಡೆ ಇದ್ದ ಕ್ರಿಸ್ ಜೋರ್ಡಾನ್ ಎರಡನೇ ರನ್ ಓಡುವಾಗ ಕ್ರೀಸ್ ಮುಟ್ಟಿಲ್ಲ ಎಂದು ಅಂಪಾಯರ್ ಒಂದು ರನ್ ಕಡಿತಗೊಳಿಸಿದರು. ಎರಡು ರನ್ ಓಡಿದರೂ ತಂಡಕ್ಕೆ ಒಂದೇ ರನ್ ನೀಡಲಾಯಿತು. ಈ ಒಂದು ರನ್ ಅಂತಿಮವಾಗಿ ತಂಡಕ್ಕೆ ಮುಳುವಾಯಿತು. ಪಂದ್ಯ ಟೈ ಆಯಿತು. ಸೂಪರ್ ಓವರ್ ನಲ್ಲಿ ರಾಹುಲ್ ಪಡೆ ಸೋಲನುಭವಿಸಿತು.

ಇಷ್ಟೇ ಆಗಿದ್ದರೆ ದೊಡ್ಡ ವಿಷಯ ಆಗುತ್ತಿರಲಿಲ್ಲ. ಆದರೆ ಅಂಪಾಯರ್ ನಿತಿನ್ ಮೆನನ್ ನೀಡಿದ ಆ ತೀರ್ಪು ತಪ್ಪಾಗಿತ್ತು. ಜೋರ್ಡಾನ್ ಸರಿಯಾಗಿ ಕ್ರೀಸ್ ಮುಟ್ಟಿದ್ದು ರೀಪ್ಲೇಯಲ್ಲಿ ಸ್ಪಷ್ಟವಾಗಿತ್ತು. ಐಸಿಸಿ ಎಲೈಟ್ ಪ್ಯಾನೆಲ್ ದರ್ಜೆಯ ಅಂಪಾಯರ್ ನಿತಿನ್ ಮೆನನ್ ತಪ್ಪಿನಿಂದ ಪಂಜಾಬ್ ತಂಡ ಸೋಲಿನೊಂದಿಗೆ ಕೂಟ ಆರಂಭಿಸಬೇಕಾಯಿತು.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಕಿಂಗ್ಸ್ ಇಲೆವೆನ್ ಆಟಗಾರ ವೀರೇಂದ್ರ ಸೆಹವಾಗ್,” ಮ್ಯಾನ್ ಆಫ್ ದಿ ಮ್ಯಾಚ್ ಗೆ ನಿಮ್ಮ ಆಯ್ಕೆ ತಪ್ಪಾಗಿತ್ತು. ಈ ತೀರ್ಪು ನೀಡಿದ ಅಂಪಾಯರ್ ಗೆ ನೀವು ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಬೇಕಿತ್ತು” ಎಂದು ಹೇಳಿದ್ದಾರೆ.
I don’t agree with the man of the match choice . The umpire who gave this short run should have been man of the match.
— Virender Sehwag (@virendersehwag) September 20, 2020
Short Run nahin tha. And that was the difference. #DCvKXIP pic.twitter.com/7u7KKJXCLb
ಮಾಜಿ ಆಟಗಾರ ಆಕಾಶ್ ಚೋಪ್ರಾ ಕೂಡಾ ಈ ಬಗ್ಗೆ ಮಾತನಾಡಿದ್ದು, ಇಷ್ಟೆಲ್ಲಾ ಟೆಕ್ನಾಲಜಿ ಇರುವಾಗ ಈ ತಪ್ಪು ನಡೆಯಬಾರದು. ಥರ್ಡ್ ಅಂಪಾಯರ್ ಆದರೂ ಇದನ್ನು ಸರಿಪಡಿಸಬಹುದಿತ್ತು ಎಂದಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm