ಬ್ರೇಕಿಂಗ್ ನ್ಯೂಸ್
01-04-22 01:45 pm Source: Vijayakarnataka ಕ್ರೀಡೆ
ಮುಂಬೈ: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 2022ರ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ ಆರನೇ ಪಂದ್ಯದಲ್ಲಿ ರೂಪಿಸಿದ್ದ ಫೀಲ್ಡಿಂಗ್ ರಣತಂತ್ರವನ್ನು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ರಿಕೆಟ್ ಡೈರೆಕ್ಟರ್ ಮೈಕ್ ಹೇಸನ್ ಬಹಿರಂಗಪಡಿಸಿದ್ದಾರೆ.
ಹದಿನೈದನೇ ಆವೃತ್ತಿಯ ಐಪಿಎಲ್ ಟೂರ್ನಿಯ ತನ್ನ ಆರಂಭಿಕ ಪಂದ್ಯದಲ್ಲಿ ಆರ್ಸಿಬಿ ತಂಡ 205 ರನ್ ಗಳಿಸಿದ ಹೊರತಾಗಿಯೂ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಅನುಭವಿಸಿತ್ತು. ಆದರೆ ಬುಧವಾರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಆರ್ಸಿಬಿ ಬೌಲರ್ಗಳು ಶಕ್ತಿಯುತವಾಗಿ ಕಮ್ಬ್ಯಾಕ್ ಮಾಡಿದ್ದರು.
ವಾನಿಂದು ಹಸರಂಗ, ಮೊಹಮ್ಮದ್ ಸಿರಾಜ್ ಸೇರಿದಂತೆ ಆರ್ಸಿಬಿ ಬೌಲರ್ಗಳ ಮಾರಕ ಬೌಲಿಂಗ್ ದಾಳಿಗೆ ನಲುಗಿದ್ದ ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್ ಕೇವಲ 128 ರನ್ಗಳಿಗೆ ಆಲ್ಔಟ್ ಆಗಿತ್ತು. ಬಳಿಕ ಸುಲಭ ಗುರಿ ಹಿಂಬಾಲಿಸಿದ್ದ ಆರ್ಸಿಬಿ ಕಠಿಣ ಹೋರಾಟ ನಡೆಸಿ ಮೂರು ವಿಕೆಟ್ ಗೆಲುವು ಸಾಧಿಸಿತ್ತು.
ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಅಭ್ಯಾಸದಲ್ಲಿ ಆರ್ಸಿಬಿ ತಂಡಕ್ಕೆ ಫೀಲ್ಡಿಂಗ್ಗೆ ಸಂಬಂಧಿಸಿದಂತೆ ಅದ್ಭುತ ರಣತಂತ್ರವನ್ನು ಬೌಲರ್ಗಳಿಗೆ ಹೇಳಿಕೊಡಲಾಗಿತ್ತು. ಅದರಂತೆ ಆರ್ಸಿಬಿ ತಂಡ ಕೋಲ್ಕತಾ ವಿರುದ್ಧ ಯಶಸ್ವಿಯಾಗಿತ್ತು. ಈ ಬಗ್ಗೆ ಬೆಂಗಳೂರು ಫ್ರಾಂಚೈಸಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಶೇರ್ ಮಾಡಿರುವ ವಿಡಿಯೋದಲ್ಲಿ ಮೈಕ್ ಹೇಸನ್ ಫೀಲ್ಡಿಂಗ್ ಪ್ಲಾನ್ ಬಗ್ಗೆ ಸರಾಗವಾಗಿ ವಿವರಿಸಿದ್ದಾರೆ.
"ಪಂದ್ಯದಲ್ಲಿ ಬ್ಯಾಟಿಂಗ್ ಅಥವಾ ಬೌಲಿಂಗ್ ಆಗಲಿ ಒತ್ತಡವನ್ನು ಹೇಗೆ ನಿಭಾಯಿಸುತ್ತೀರಿ ಎಂಬುದು ಇಲ್ಲಿ ತುಂಬಾ ಮುಖ್ಯವಾಗುತ್ತದೆ. ಕೆಕೆಆರ್ ವಿರುದ್ಧ ಸಕ್ಸಸ್ ಆಗಿರುವುದರ ಹಿಂದೆ ನಾವು ಸಾಕಷ್ಟು ಕೆಲಸ ಮಾಡಿದ್ದೇವೆ. ನಾಯಕ, ಬೌಲರ್ಗಳು ಒಂದು ಕಡೆ ಫೀಲ್ಡ್ ಸೆಟ್ ಹೇಗೆ ಮಾಡಬೇಕೆಂಬ ರಣತಂತ್ರವನ್ನು ನಾವು ರೂಪಿಸಿದ್ದೆವು. ಯಾವ ಫೀಲ್ಡ್ ನಿಮಗೆ ಬೇಕು ಎಂಬುದು ಇಲ್ಲಿ ಮುಖ್ಯವಲ್ಲ. ಆದರೆ ನಿಮ್ಮ ಎಸೆತಕ್ಕೆ ಮೂರು ಬಗೆಯ ಫೀಲ್ಡ್ ಸೆಟ್ ಅನ್ನು ಇಲ್ಲಿ ನೀಡಲಾಗುತ್ತದೆ," ಎಂದು ಹೇಸನ್ ವಿವರಿಸಿದ್ದಾರೆ.

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮೂರು ವಿಕೆಟ್ಗಳಿಂದ ಗೆಲುವು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 5 ರಂದು ಟೇಬಲ್ ಟಾಪರ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲಿದೆ. ಈ ಪಂದ್ಯಕ್ಕೆ ಇನ್ನೂ ನಾಲ್ಕು ದಿನಗಳ ಸಮಯಾವಕಾಶವಿದೆ. ಈ ಹಿನ್ನೆಲೆಯಲ್ಲಿ ಆರ್ಸಿಬಿ ಇನ್ನಷ್ಟು ತಯಾರಿ ನಡೆಸಲಿದೆ.
ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಆರ್ಸಿಬಿ ತಂಡದ ಗೆಲುವಿನಲ್ಲಿ ಯುವ ವೇಗಿ ಆಕಾಶ್ ದೀಪ್ ಕೂಡ ಮಹತ್ತರ ಪಾತ್ರವಹಿಸಿದ್ದಾರೆ. 25ರ ಪ್ರಾಯದ ವೇಗಿ ಸ್ವಲ್ಪ ದುಬಾರಿಯಾದರೂ ಮೂರು ನಿರ್ಣಾಯಕ ವಿಕೆಟ್ಗಳನ್ನು ಕಬಳಿಸಿದ್ದರು. ಆರಂಭಿಕ ಬ್ಯಾಟ್ಸ್ಮನ್ ವೆಂಕಟೇಶ್ ಅಯ್ಯರ್ ವಿಕೆಟ್ ಪಡೆಯುವ ಮೂಲಕ ಕೆಕೆಆರ್ಗೆ ಆರಂಭಿಕ ಆಘಾತ ನೀಡಿದ್ದರು.
"ಮೊದಲನೇ ಸಂಗತಿ ಏನೆಂದರೆ ನಾವು ಓಪನ್ ನೆಟ್ಸ್ನಲ್ಲಿ ಬೌಲ್ ಮಾಡಿದ್ದೇವೆ. ಇದು ಮೋಜಿನಿಂದ ಕೂಡಿತ್ತು ಹಾಗೂ ನಮಗೆ ಕೊಟ್ಟಿದ್ದ ಯೋಜನೆಯನ್ನು ನಾವು ಹಿಂಬಾಲಿಸಿದ್ದೆವು. ರನ್ ಕೊಟ್ಟರೂ ಕೂಡ ಪ್ಲಾನ್ಗೆ ಅಂಟಿಕೊಂಡು ಬೌಲ್ ಮಾಡುವಂತೆ ನಿರ್ದೇಶನ ನೀಡಲಾಗಿತ್ತು. ಇದರಲ್ಲಿ ಕೆಲ ಎಸೆತಗಳು ಸರಿಯಾದ ಜಾಗದಲ್ಲಿ ಪಿಚ್ ಆಗಿದ್ದವು, ಇನ್ನು ಕೆಲವು ಎಸೆತಗಳಲ್ಲಿ ರನ್ ಬಿಟ್ಟುಕೊಟ್ಟಿದ್ದೆ. ಆದರೆ, ಯೋಜನೆಯಂತೆ ಬೌಲ್ ಮಾಡಿದ್ದಕ್ಕೆ ನನಗೆ ವಿಶ್ವಾಸ ಹೆಚ್ಚಾಗಿದೆ," ಎಂದು ಆಕಾಶ್ ದೀಪ್ ತಿಳಿಸಿದ್ದಾರೆ.
Ipl 2022 You Got Have At Least Three Options In Terms Of Deliveries You Can Bowl Mike Hesson Explains Rcbs Bowling Drill Before Kkr Game.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm